ಮೂರನೇ ಹಣಕಾಸು ಆಯೋಗದ ಶಿಫಾರಸ್ಸುಗಳ ಜಾರಿ ಹಾಗೂ ಉಡುಪಿ ನಿರ್ಣಯಗಳು 2011ರ ಅನುಷ್ಠಾನ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ
ದಿನಾಂಕ: 20-07-2012
2012ನೇ ಜುಲೈ 18ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಹಕ್ಕೊತ್ತಾಯ ಸಭೆಯ ಅನುಸರಣೆಯಾಗಿ ದಿನಾಂಕ 20-07-2012ರಂದು ಮುಖ್ಯಮಂತ್ರಿಗಳನ್ನು ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನದ ರಾಜ್ಯ ಸಮಿತಿ ಸದಸ್ಯರು ಭೇಟಿ ಮಾಡಿ, ಉಡುಪಿ ನಿರ್ಣಯಗಳ ಹಾಗೂ ಮೂರನೇ ಹಣಕಾಸು ಆಯೋಗದ ಶಿಫಾರಸ್ಸುಗಳ ಜಾರಿಗಾಗಿ ಒತ್ತಾಯಿಸಿ ತಮ್ಮ ಮನವಿಯನ್ನು ನೀಡಿದರು. ಮುಖ್ಯಮಂತ್ರಿಗಳು ಈ ಕುರಿತಾಗಿ ಸಂಬಂಧಪಟ್ಟ ಇಲಾಖೆ ಹಾಗೂ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಹಾಗೂ ಈ ಕುರಿತಾಗಿ ಸಧ್ಯದಲ್ಲೇ ಸಭೆ ಕರೆಯುವುದಾಗಿ ಭರವಸೆ ನೀಡಿದರು.