ಗ್ರಾಮ ಪಂಚಾಯತ್ ವಿಚಾರ ಸಂಕಿರಣ
ದಿನಾಂಕ: 10-09-2012,
ಸ್ಥಳ: ರೋಟರಿ ಲಕ್ಷ್ಮಿ ನರಸಿಂಹ ಕಲಾಮಂದಿರ, ಕುಂದಾಪುರ
ಗ್ರಾಮ ಪಂಚಾಯತ್ ಗಳು ಎದುರಿಸುತ್ತಿರುವ ಆಡಳಿತಾತ್ಮಕ ಸಮಸ್ಯೆಗಳನ್ನು ಸಾಧ್ಯವಿರುವಷ್ಟು ಜಿಲ್ಲಾ ಮಟ್ಟದಲ್ಲಿಯೇ ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಈ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಗ್ರಾಮ ಪಂಚಾಯತ್ ಗಳಿಗೆ ಸಂಭಧಿಸಿದ ಕಾರ್ಯಕ್ರಮಗಳ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಕುಂದಾಪುರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳೂ ಸೇರಿ ಪಂಚಾಯತ್ ನ ದೈನಂದಿನ ಆಡಳಿತಕ್ಕೆ ಸಂಬಂಧಿಸಿದಂತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಕ್ರೋಢೀಕರಿಸಿ, ಇಲಾಖಾವಾರು ಸಮಸ್ಯೆಗಳ ಪಟ್ಟಿಯನ್ನು ತಯಾರಿಸಿ, ಆಯಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.