ಗ್ರಾಮ ಸ್ವರಾಜ್ಯ ಸಮಾವೇಶ 2011
73ನೇ ತಿದ್ದುಪಡಿಯ ಆಶಯದಂತೆ ವಿಕೇಂದ್ರೀಕರಣಕ್ಕೆ, ಪಂಚಾಯತ್ ರಾಜ್ ವ್ಯವಸ್ಥೆಗೆ ಹೆಚ್ಚಿನ ಹೊಣೆಗಾರಿಕೆ ಹಾಗೂ ಜವಾಬ್ದಾರಿ ಇದೆ. ಆದರೂ ಸಂವಿಧಾನ ತಿದ್ದುಪಡಿ ಹಾಗೂ ಕರ್ನಾಟಕ ಪಂಚಾಯತ್ ರಾಜ್ ಕಾಯಿದೆಗಳ ನಿರ್ದೇಶನದಂತೆ ಗ್ರಾಮ ಪಂಚಾಯತ್ ಸ್ವಯಮಾಧಿಕಾರವುಳ್ಳ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲು ಅನೇಕ ಅಡೆತಡೆಗಳು ಬರುತ್ತಲೇ ಇವೆ. ರಾಜ್ಯ ಸರ್ಕಾರವು ಗ್ರಾಮ ಪಂಚಾಯತ್ ಗಳಿಗೆ ನೀಡಿದ ಅಧಿಕಾರವನ್ನು ಹಿಂಪಡೆಯುವುದು, ಅಧಿಕಾರದ ಪರಿಮಿತಿಯನ್ನು ಕಡಿಮೆ ಮಾಡುವುದು ಇವೆಲ್ಲಾ ಆಗಾಗ ನಡೆಯುತ್ತಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮ ಸಭಾ ಸದಸ್ಯರು ಒಂದೆಡೆ ಸೇರಿ, ಗ್ರಾಮ ಪಂಚಾಯತ್ಗಳನ್ನು ಸುಲಲಿತವಾಗಿ ಮುನ್ನಡೆಸಲು ಎದುರಾಗುತ್ತಿರುವ ಅಡೆತಡೆಗಳನ್ನು ಕೂಲಂಕುಶವಾಗಿ ಚರ್ಚಿಸಿ, ಅವುಗಳಿಗೆ ಪರಿಹಾರೋಪಾಯಗಳನ್ನು ಗುರುತಿಸಿಕೊಳ್ಳಲು ಹಾಗೂ ಈ ಪರಿಹಾರಗಳನ್ನು ರಾಜ್ಯ ಸರ್ಕಾರದ ಮುಂದೆ ಮಂಡಿಸಿ, ಅವುಗಳ ಜಾರಿಯ ಬಗ್ಗೆ ಸರ್ಕಾರದ ಬದ್ಧತೆಯನ್ನು ಪಡೆದುಕೊಳ್ಳಲು ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು 2011ನೇ ಡಿಸೆಂಬರ್ 9, 10 ಹಾಗೂ 11ರಂದು ರಾಜ್ಯ ಮಟ್ಟದ ಗ್ರಾಮ ಸ್ವರಾಜ್ ಸಮಾವೇಶ 2011ನ್ನು ಉಡುಪಿಯಲ್ಲಿ ನಡೆಸಿತು.
ಈ ಸಮಾವೇಶದಲ್ಲಿ ರಾಜ್ಯದಾದ್ಯಂತ 28 ಜಿಲ್ಲೆಗಳಿಂದ ಅಂದಾಜು 4000ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮ ಸಭೆಯ ಸದಸ್ಯರು ಸಕ್ರೀಯವಾಗಿ ಪಾಲ್ಗೊಂಡರು. ನಿಜವಾದ ವಿಕೇಂದ್ರೀಕರಣವನ್ನು ಸಾಧಿಸಲು ಪಂಚಾಯತ್ಗಳು ಎದುರಿಸುತ್ತಿರುವ ಕಾನೂನಾತ್ಮಕ ಹಾಗೂ ಆಡಳಿತಾತ್ಮಕ ಅಡತಡೆಗಳನ್ನು ಈ ಸಮಾವೇಶದಲ್ಲಿ ಚರ್ಚಿಸಲಾಯಿತು ಮತ್ತು ಅವುಗಳಿಗೆ ಪರಿಹಾರಗಳನ್ನು ಗುರುತಿಸಿಕೊಳ್ಳಲಾಯಿತು. ದೇಶದ ವಿವಿಧ ಭಾಗಗಳಿಂದ ಈ ಸಮಾವೇಶದಲ್ಲಿ ಭಾಗವಹಿಸಿದ್ದ ಅನೇಕ ಸಂಪನ್ಮೂಲ ವ್ಯಕ್ತಿಗಳ ಕೊಡುಗೆ, ಈ ಸಮಾವೇಶದಲ್ಲಿ ನಡೆದ ಚರ್ಚೆಗೆ ವಿಶೇಷ ಮೆರಗು ನೀಡಿತು.
ಈ ಸಮಾವೇಶದಲ್ಲಿ ರಾಜ್ಯದಾದ್ಯಂತ 28 ಜಿಲ್ಲೆಗಳಿಂದ ಅಂದಾಜು 4000ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮ ಸಭೆಯ ಸದಸ್ಯರು ಸಕ್ರೀಯವಾಗಿ ಪಾಲ್ಗೊಂಡರು. ನಿಜವಾದ ವಿಕೇಂದ್ರೀಕರಣವನ್ನು ಸಾಧಿಸಲು ಪಂಚಾಯತ್ಗಳು ಎದುರಿಸುತ್ತಿರುವ ಕಾನೂನಾತ್ಮಕ ಹಾಗೂ ಆಡಳಿತಾತ್ಮಕ ಅಡತಡೆಗಳನ್ನು ಈ ಸಮಾವೇಶದಲ್ಲಿ ಚರ್ಚಿಸಲಾಯಿತು ಮತ್ತು ಅವುಗಳಿಗೆ ಪರಿಹಾರಗಳನ್ನು ಗುರುತಿಸಿಕೊಳ್ಳಲಾಯಿತು. ದೇಶದ ವಿವಿಧ ಭಾಗಗಳಿಂದ ಈ ಸಮಾವೇಶದಲ್ಲಿ ಭಾಗವಹಿಸಿದ್ದ ಅನೇಕ ಸಂಪನ್ಮೂಲ ವ್ಯಕ್ತಿಗಳ ಕೊಡುಗೆ, ಈ ಸಮಾವೇಶದಲ್ಲಿ ನಡೆದ ಚರ್ಚೆಗೆ ವಿಶೇಷ ಮೆರಗು ನೀಡಿತು.