ಗ್ರಾಮ ಸ್ವರಾಜ್ ಅನುಷ್ಟಾನಕ್ಕೆ ಚಿಂತನ ಮಂಥನ ಕಾರ್ಯಕ್ರಮ
ದಿನಾಂಕ: 10-11-2016
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಜಾರಿಗೆ ಬಂದಿದ್ದು ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವಲ್ಲಿ ಹಲವಾರು ಅಡೆತಡೆಗಳಿದ್ದು ಅವುಗಳನ್ನು ನಿವಾರಿಸಿ ಕಾಯ್ದೆಯ ಆಶಯಕ್ಕೆ ಅನುಗುಣವಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ವಿವಿಧ ಸಮಾನ ಮನಸ್ಕ ಸಂಸ್ಥೆಗಳು, ಜನಪ್ರತಿನಿಧಿಗಳೊಂದಿಗೆ(ಸ್ಥಳೀಯಾಡಳಿತದಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು), ಚರ್ಚಿಸಲು ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು "ಗ್ರಾಮ ಸ್ವರಾಜ್ ಅನುಷ್ಟಾನ ಚಿಂತನ-ಮಂಥನ" ಕಾರ್ಯಕ್ರಮವನ್ನು ಆಯೋಜಿಸಿತ್ತು. ಇಲ್ಲಿ ಪ್ರಸ್ತುತ ಕಾಯಿದೆಯನ್ನು ಅನುಷ್ಟಾನಗೊಳಿಸುವಲ್ಲಿ ಇರುವ ಸವಾಲುಗಳು ಹಾಗು ಅದನ್ನು ನಿವಾರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.