ಕರ್ನಾಟಕ ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಮಸೂದೆ 2014ರ ಅನುಷ್ಠಾನಕ್ಕೆ ಆಗ್ರಹಿಸಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಜೊತೆ ಮಾತುಕತೆ
ದಿನಾಂಕ: 13-03-2015
ಶ್ರೀ ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಪಂಚಾಯತ್ ರಾಜ್ ಪರಿಣಿತರನ್ನೊಳಗೊಂಡ ಕರ್ನಾಟಕ ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಸಮಿತಿಯು ಪ್ರಸ್ತುತ ಇರುವ 1993ರ ಕಾಯಿದೆಯನ್ನು ಕೂಲಂಕುಷವಾಗಿ ಅಭ್ಯಸಿಸಿ, ವಿಶ್ಲೇಷಿಸಿ, ಆಮೂಲಾಗ್ರ ಬದಲಾವಣೆಯ ಶಿಫಾರಸ್ಸುಗಳನ್ನೊಳಗೊಂಡ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ನೀಡಿದೆ. ಮಹಾತ್ಮಾ ಗಾಂಧಿಯವರ ಕನಸಿನ ಗ್ರಾಮ ಸ್ವರಾಜ್ಯದ ಕಲ್ಪನೆಯ ಆಶಯಗಳನ್ನು ಎತ್ತಿಹಿಡಿಯುವ ಈ ವರದಿಯ ಶಿಫಾರಸ್ಸುಗಳನ್ನು ಮತ್ತು ಮಸೂದೆಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಜೊತೆ ಮಾತುಕತೆ
ದಿನಾಂಕ: 13-03-2015
ಶ್ರೀ ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಪಂಚಾಯತ್ ರಾಜ್ ಪರಿಣಿತರನ್ನೊಳಗೊಂಡ ಕರ್ನಾಟಕ ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಸಮಿತಿಯು ಪ್ರಸ್ತುತ ಇರುವ 1993ರ ಕಾಯಿದೆಯನ್ನು ಕೂಲಂಕುಷವಾಗಿ ಅಭ್ಯಸಿಸಿ, ವಿಶ್ಲೇಷಿಸಿ, ಆಮೂಲಾಗ್ರ ಬದಲಾವಣೆಯ ಶಿಫಾರಸ್ಸುಗಳನ್ನೊಳಗೊಂಡ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ನೀಡಿದೆ. ಮಹಾತ್ಮಾ ಗಾಂಧಿಯವರ ಕನಸಿನ ಗ್ರಾಮ ಸ್ವರಾಜ್ಯದ ಕಲ್ಪನೆಯ ಆಶಯಗಳನ್ನು ಎತ್ತಿಹಿಡಿಯುವ ಈ ವರದಿಯ ಶಿಫಾರಸ್ಸುಗಳನ್ನು ಮತ್ತು ಮಸೂದೆಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು.