ವಸತಿ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಗ್ರಾಮ ಸಭೆಯ ಅಧಿಕಾರಕ್ಕೆ ಕತ್ತರಿ
ಗ್ರಾಮ ಪಂಚಾಯತ್ ಹಾಗೂ ಗ್ರಾಮ ಸಭೆಯ ಹಕ್ಕು ಮತ್ತು ಅಧಿಕಾರಗಳನ್ನು ಮೊಟಕುಗೊಳಿಸುವಲ್ಲಿ ರಾಜ್ಯ ಸರ್ಕಾರ ಹಲವಾರು ವ್ಯತಿರಿಕ್ತ ಹಾಗೂ ಆತಂಕಕಾರಿ ಹೆಜ್ಜೆಗಳನ್ನು ಇಡುತ್ತಿದ್ದು, ನಮ್ಮ ರಾಜ್ಯದ ವಸತಿ ಸಚಿವರು, ‘ಆಶ್ರಯ ಮನೆಗಳಿಗೆ ಫಲಾನುಭವಿಗಳ ಪಟ್ಟಿ ತಯಾರಿಸಿದ ಬಳಿಕ ಅದಕ್ಕೆ ಗ್ರಾಮ ಸಭೆಯ ಒಪ್ಪಿಗೆ ಇನ್ನು ಮುಂದೆ ಅಂತಿಮವಲ್ಲ. ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿ.ಇ.ಓ, ತಹಶೀಲ್ದಾರ್, ಪಿ.ಡಿ.ಓ.ಗಳನ್ನು ಒಳಗೊಂಡ ಉಸ್ತುವಾರಿ ಸಮಿತಿ ರಚಿಸಲಾಗುತ್ತದೆ. ಫಲಾನುಭವಿಗಳು ಅರ್ಹರೇ, ಅವರಿಗೆ ಮನೆ ದೊರಕಿದೆಯೇ ಎಂಬುದನ್ನು ಖಾತರಿಪಡಿಸುವ ಜವಾಬ್ದಾರಿಯೂ ಸಮಿತಿಯದು’ ಎಂದು ರಾಜ್ಯದ ವಸತಿ ಸಚಿವರು ಹೇಳಿಕೆ ನೀಡಿದ್ದು ಅದನ್ನು ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು ತೀವ್ರವಾಗಿ ವಿರೋಧಿಸುತ್ತದೆ.