ಮೂರನೇ ಹಣಕಾಸು ಆಯೋಗದ ಶಿಫಾರಸ್ಸುಗಳ ಜಾರಿ ಹಾಗೂ ಉಡುಪಿ ನಿರ್ಣಯಗಳು 2011ರ ಅನುಷ್ಠಾನಕ್ಕಾಗಿ ಹಕ್ಕೊತ್ತಾಯ
ಸ್ಥಳ: ಬೆಂಗಳೂರಿನ ಫ್ರೀಡಂ ಪಾರ್ಕ್
ದಿನಾಂಕ:18ನೇ ಜುಲೈ 2012
ಈ ಹಿಂದೆ ಡಿಸೆಂಬರ್ 2011ರಲ್ಲಿ ಗ್ರಾಮ ಸ್ವಾರಾಜ್ ಸಮಾವೇಶ ನಡೆಸಿ ಗ್ರಾಮ ಪಂಚಾಯತ್ಗಳಿಗೆ ಸಂಬಂಧಿಸಿದಂತೆ ಉಡುಪಿ ನಿರ್ಣಯಗಳು 2011ನ್ನು ಸರ್ಕಾರದ ಮುಂದೆ ಮಂಡಿಸಿ, ಅವುಗಳ ಜಾರಿಗಾಗಿ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಇದಕ್ಕೆ ಪೂರಕವಾಗಿ 2012ನೇ ಮಾರ್ಚ್ ತಿಂಗಳಿನಲ್ಲಿ ನಡೆದ ವಿಧಾನ ಸಭೆಯ ಅಧಿವೇಶನದ ಸಂದರ್ಭದಲ್ಲಿ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಗಿತ್ತು. ಎರಡೂ ಸಂದರ್ಭಗಳಲ್ಲಿಯೂ ಉಡುಪಿ ನಿರ್ಣಯಗಳು 2011ರ ಶಿಫಾರಸ್ಸುಗಳನ್ನು ಆದಷ್ಟು ಶೀಘ್ರದಲ್ಲಿ ಅನುಷ್ಠಾನಗೊಳಿಸುವುದಾಗಿ ಭರವಸೆ ನೀಡಿದರು.
ಆದರೆ 2012 ನೇ ಜುಲೈ ತಿಂಗಳ ಮಳೆಗಾಲದ ಅಧಿವೇಶನ ಬರುವವರೆಗೂ ಸರ್ಕಾರವು ಯಾವುದೇ ರೀತಿಯಲ್ಲಿ ಸ್ಪಂದಿಸದೇ ಇರುವ ಕಾರಣ ಜುಲೈ 18ನೇ 2012ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು ಉಡುಪಿ ನಿರ್ಣಯಗಳ ಹಾಗೂ ಮೂರನೇ ಹಣಕಾಸು ಆಯೋಗದ ಶಿಫಾರಸ್ಸುಗಳ ಜಾರಿಗಾಗಿ ಒತ್ತಾಯಿಸಿ ಬೃಹತ್ ಹಕ್ಕೊತ್ತಾಯ ಸಭೆಯನ್ನು ಹಮ್ಮಿಕೊಂಡಿತ್ತು. ಈ ಸಭೆಯಲ್ಲಿ ರಾಜ್ಯದಾದ್ಯಂತ 29 ಜಿಲ್ಲೆಗಳ ಸುಮಾರು 8000 ಗ್ರಾಮ ಪಂಚಾಯತ್ ಹಾಗೂ ಗ್ರಾಮ ಸಭಾ ಸದಸ್ಯರು ಅತ್ಯಂತ ಉತ್ಸುಕತೆಯಿಂದ ಪಾಲ್ಗೊಂಡಿದ್ದರು. ಶೇಕಡಾ 85% ರಷ್ಟು ಮಹಿಳೆಯರು ಈ ಸಭೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡಿರುವುದು ಈ ಸಭೆಯ ವಿಶೇಷ.
ಆದರೆ 2012 ನೇ ಜುಲೈ ತಿಂಗಳ ಮಳೆಗಾಲದ ಅಧಿವೇಶನ ಬರುವವರೆಗೂ ಸರ್ಕಾರವು ಯಾವುದೇ ರೀತಿಯಲ್ಲಿ ಸ್ಪಂದಿಸದೇ ಇರುವ ಕಾರಣ ಜುಲೈ 18ನೇ 2012ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು ಉಡುಪಿ ನಿರ್ಣಯಗಳ ಹಾಗೂ ಮೂರನೇ ಹಣಕಾಸು ಆಯೋಗದ ಶಿಫಾರಸ್ಸುಗಳ ಜಾರಿಗಾಗಿ ಒತ್ತಾಯಿಸಿ ಬೃಹತ್ ಹಕ್ಕೊತ್ತಾಯ ಸಭೆಯನ್ನು ಹಮ್ಮಿಕೊಂಡಿತ್ತು. ಈ ಸಭೆಯಲ್ಲಿ ರಾಜ್ಯದಾದ್ಯಂತ 29 ಜಿಲ್ಲೆಗಳ ಸುಮಾರು 8000 ಗ್ರಾಮ ಪಂಚಾಯತ್ ಹಾಗೂ ಗ್ರಾಮ ಸಭಾ ಸದಸ್ಯರು ಅತ್ಯಂತ ಉತ್ಸುಕತೆಯಿಂದ ಪಾಲ್ಗೊಂಡಿದ್ದರು. ಶೇಕಡಾ 85% ರಷ್ಟು ಮಹಿಳೆಯರು ಈ ಸಭೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡಿರುವುದು ಈ ಸಭೆಯ ವಿಶೇಷ.